Gruhalakshmi :ಒಂದು ವಾರದೊಳಗೆ ಬಾಕಿ ಹಣ ಫಲಾನುಭವಿಗಳ ಖಾತೆಗೆ ಲಕ್ಷ್ಮಿ ಹೆಬಾಳ್ಕರ್!

ಸರ್ಕಾರದ ಗೃಹಲಕ್ಷ್ಮಿ ಗ್ಯಾರಂಟಿ ಯೋಜನೆಯ ಫಲಾನುಭವಿಗಳಿಗೆ ಒಳ್ಳೆಯ ಸುದ್ದಿಯೊಂದು ಇದೀಗ ಲಭ್ಯವಾಗಿದೆ. ಕಳೆದ ಕೆಲವು ತಿಂಗಳಿನಿಂದ ಯೋಜನೆಯ ₹2,000 ಆರ್ಥಿಕ ನೆರವು ಸಕಾಲಕ್ಕೆ ಫಲಾನುಭವಿಗಳ ಖಾತೆಗೆ ಜಮೆಯಾಗದಿರುವ ಬಗ್ಗೆ ದೂರುಗಳು ಕೇಳಿಬಂದಿದ್ದವು. ಈಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಈ ಕುರಿತು ಮಹತ್ವದ ಮಾಹಿತಿಯನ್ನು ನೀಡಿದ್ದಾರೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ಅವರು ಜೂನ್ 2, 2025ರಂದು ಬೆಂಗಳೂರಿನಲ್ಲಿ ಮಾತನಾಡಿದ್ದು, ಮುಂದಿನ ಒಂದು ವಾರದೊಳಗೆ ಎಲ್ಲ ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಜಮೆಯಾಗಲಿದೆ ಎಂದು ಭರವಸೆ ನೀಡಿದ್ದಾರೆ. ಏಪ್ರಿಲ್ 2025ರ ಕಂತು ಸೇರಿದಂತೆ ಬಾಕಿ ಇರುವ ತಿಂಗಳ ಹಣವನ್ನು ಡಿಬಿಟಿ (ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್‌ಫರ್) ಮೂಲಕ ಫಲಾನುಭವಿಗಳ ಖಾತೆಗೆ ವರ್ಗಾಯಿಸಲಾಗುವುದು ಎಂದು ತಿಳಿಸಿದ್ದಾರೆ.

ಜನವರಿ ಮತ್ತು ಫೆಬ್ರವರಿ ತಿಂಗಳ ಕಂತುಗಳಿಗೆ ಈಗಾಗಲೇ ಬಿಲ್ ಮಾಡಲಾಗಿದೆಯಾದರೂ, ಹಣಕಾಸು ವರ್ಷದ ಮುಕ್ತಾಯದಿಂದಾಗಿ ಮಾರ್ಚ್ 2025ರ ಕಂತಿನ ಹಣ ಜಮೆಯಾಗಲು ವಿಳಂಬವಾಯಿತು ಎಂದು ಅವರು ಸ್ಪಷ್ಟಪಡಿಸಿದ್ದಾರೆ.ಗೃಹಲಕ್ಷ್ಮಿ ಯೋಜನೆಯ ಹಣದ ವಿಳಂಬಕ್ಕೆ ಹಣಕಾಸು ವರ್ಷದ ಮುಕ್ತಾಯವೇ ಮುಖ್ಯ ಕಾರಣವಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್ ತಿಳಿಸಿದ್ದಾರೆ. ಆದರೂ, ಎಲ್ಲ ಬಾಕಿ ಕಂತುಗಳನ್ನು ಶೀಘ್ರದಲ್ಲೇ ಜಮೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಮಾರ್ಚ್ 31, 2025ರಂದು 18ನೇ ಕಂತನ್ನು ಬಿಡುಗಡೆ ಮಾಡಲಾಗಿತ್ತು ಮತ್ತು ಈಗ ಏಪ್ರಿಲ್ ತಿಂಗಳ ಕಂತು ಒಂದು ವಾರದೊಳಗೆ ಜಮೆಯಾಗಲಿದೆ ಎಂದು ಅವರು ದೃಢಪಡಿಸಿದ್ದಾರೆ.

ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯು ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಒತ್ತು ನೀಡುತ್ತದೆ. ಈ ಯೋಜನೆಯಡಿ, ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ರೇಷನ್ ಕಾರ್ಡ್‌ಗಳಲ್ಲಿ ಮನೆಯ ಮುಖ್ಯಸ್ಥರಾಗಿ ಗುರುತಿಸಲ್ಪಟ್ಟ ಮಹಿಳೆಯರಿಗೆ ಪ್ರತಿ ತಿಂಗಾಳು ₹2,000 ಆರ್ಥಿಕ ನೆರವು ನೀಡಲಾಗುತ್ತದೆ.

ಈ ಯೋಜನೆಯಿಂದ ಸುಮಾರು 1.28 ಕೋಟಿ ಮಹಿಳೆಯರು ಫಲಾನುಭವಿಗಳಾಗಿದ್ದಾರೆ. ಆದರೆ, ಕಳೆದ ಕೆಲವು ತಿಂಗಳಿನಿಂದ ಕಂತುಗಳ ವಿಳಂಬದಿಂದಾಗಿ ಫಲಾನುಭವಿಗಳಲ್ಲಿ ಆತಂಕ ಮೂಡಿತ್ತು. ಈಗ ಸರ್ಕಾರದ ಭರವಸೆಯಿಂದ ಈ ಆತಂಕ ದೂರವಾಗುವ ಸಾಧ್ಯತೆ ಇದೆ.ಗೃಹಲಕ್ಷ್ಮಿ ಯೋಜನೆಯ ಹಣದ ವಿಳಂಬದ ಬಗ್ಗೆ ಬಿಜೆಪಿ ಗಂಭೀರ ಆರೋಪಗಳನ್ನು ಮಾಡಿದೆ. ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಹಣವನ್ನು ಕಾಂಗ್ರೆಸ್ ಕಾರ್ಯಕರ್ತರಿಗೆ ವಿನಿಯೋಗಿಸುತ್ತಿದೆ ಎಂದು ದೂರಿದೆ. ಸಿದ್ದರಾಮಯ್ಯ ಸರ್ಕಾರಕ್ಕೆ ಮಾನ-ಮರ್ಯಾದೆ ಇಲ್ಲ ಎಂದು ಟೀಕಿಸಿರುವ ಬಿಜೆಪಿ, ಗೃಹಲಕ್ಷ್ಮಿ ಹಣವನ್ನು ಮೂರು ತಿಂಗಳಿನಿಂದ ಜಮೆ ಮಾಡದಿರುವುದು ಜನರ ಮೇಲಿನ ದ್ರೋಹವೆಂದು ಆರೋಪಿಸಿದೆ. ಆದರೆ, ಕಾಂಗ್ರೆಸ್ ನಾಯಕರು ಈ ಆರೋಪಗಳನ್ನು ತಳ್ಳಿಹಾಕಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣದ ಕೊರತೆ ಇಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.

sreelakshmisai
Author

sreelakshmisai

Leave a Reply

Your email address will not be published. Required fields are marked *