ಮುಂಗಾರು ಮಳೆ ರಾಜ್ಯಾದ್ಯಂತ ಚುರುಕುಗೊಳ್ಳುತ್ತಿದ್ದು, ಜೂನ್ 16ರವರೆಗೆ ಕರ್ನಾಟಕದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆ ಬೀಳಲಿದ್ದು, ಭಾರತೀಯ ಹವಾಮಾನ ಇಲಾಖೆ (IMD) ರೆಡ್, ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಿದೆ.
ಬಂಗಾಳಕೊಲ್ಲಿಯ ತೀವ್ರ ವಾತಾವರಣದ ಪರಿಣಾಮ:ಬಂಗಾಳಕೊಲ್ಲಿ ಸಮುದ್ರದಲ್ಲಿ ಚಂಡಮಾರುತದ ರೀತಿಯ ವಾತಾವರಣ ರೂಪುಗೊಂಡಿದ್ದು, ಆಂಧ್ರ ಕರಾವಳಿಯ ಬಳಿ ಸಮುದ್ರ ಮಟ್ಟದಿಂದ 5.8 ಕಿ.ಮೀ ಎತ್ತರದಲ್ಲಿ ಬಿರುಗಾಳಿ ಬೀಸುತ್ತಿದೆ. ಇನ್ನು ತಮಿಳುನಾಡಿನಿಂದ ದಕ್ಷಿಣ ಮಹಾರಾಷ್ಟ್ರವರೆಗೆ ವಾಯುಭಾರ ಕುಸಿತದ ಪರಿಣಾಮದಿಂದ ರಾಜ್ಯದ 31 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ನಿರೀಕ್ಷಿಸಲಾಗಿದೆ.
ರೆಡ್ ಅಲರ್ಟ್ ಘೋಷಿತ ಜಿಲ್ಲೆಗಳು:
ಜೂನ್ 13: ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ, ಗದಗ, ಧಾರವಾಡ
ಜೂನ್ 14: ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು
ಜೂನ್ 15: ಕೊಡಗು, ದಕ್ಷಿಣ ಕನ್ನಡ
ಜೂನ್ 16: ಕರಾವಳಿ ಭಾಗ (ರೆಡ್ ಅಲರ್ಟ್), ಕಲ್ಯಾಣ ಕರ್ನಾಟಕ ಭಾಗದ ಒಳನಾಡು ಜಿಲ್ಲೆಗಳಿಗೆ ಆರೆಂಜ್/ಯೆಲ್ಲೋ ಅಲರ್ಟ್.
ಆರೆಂಜ್ ಅಲರ್ಟ್ ಜಿಲ್ಲೆಗಳು:
ಶಿವಮೊಗ್ಗ, ಗದಗ, ಧಾರವಾಡ, ಬಾಗಲಕೋಟೆ, ಕಲಬುರಗಿ, ಬೀದರ್, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ
ಗಾಳಿಯ ವೇಗ:ಬಿರುಗಾಳಿ 30–50 ಕಿ.ಮೀ/ಗಂ ವೇಗದಲ್ಲಿ ಬೀಸುವ ಸಂಭವವಿದ್ದು, ಕಡಿಮೆ ನಿಲ್ದಾಣಗಳಲ್ಲೂ ಮಳೆ ಅಬ್ಬರಿಸಲಿದೆ. ಗುಡಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.