ಭಾರತ ಸರ್ಕಾರವು ದೇಶದ ಸಣ್ಣ ಉದ್ಯಮಿಗಳನ್ನು ಉತ್ತೇಜಿಸಲು 2015 ರಲ್ಲಿ ಪ್ರಾರಂಭಿಸಿದ ಪ್ರಮುಖ ಯೋಜನೆಯೇ ಮುದ್ರಾ ಸಾಲ ಯೋಜನೆ. ಸ್ವಯಂ ಉದ್ಯೋಗಿಗಳು, ಸಣ್ಣ ವ್ಯಾಪಾರಸ್ಥರು ಮತ್ತು ಉದ್ಯಮಿಗಳು ತಮ್ಮ ವ್ಯವಹಾರ ವಿಸ್ತರಣೆಗೆ ಅಗತ್ಯವಿರುವ ಹಣಕಾಸನ್ನು ಈ ಯೋಜನೆಯ ಮೂಲಕ ಪಡೆಯಬಹುದು.
ಮುದ್ರಾ (MUDRA – Micro Units Development and Refinance Agency) ಯೋಜನೆ ಭಾರತೀಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದು. ಇದು ಸಣ್ಣ ಉದ್ಯಮಗಳು, ಸ್ವಯಂ ಉದ್ಯೋಗಿಗಳು ಹಾಗೂ ಸಣ್ಣ ವ್ಯಾಪಾರಸ್ಥರಿಗೆ ಹಣಕಾಸಿನ ಸಹಾಯ ನೀಡುವುದು ಮುಖ್ಯ ಉದ್ದೇಶವಾಗಿದೆ.
ಕೈ ಮಗ್ಗ ಮತ್ತು ಜವಳಿ ಇಲಾಖೆಯಿಂದ 2025-26ನೇ ಸಾಲಿನ ಮುದ್ರಾ ಯೋಜನೆಯಡಿ ಕೈಮಗ್ಗ ನೇಕಾರರಿಗೆ ಮಗ್ಗ ಖರೀದಿಸಲು ಅಥವಾ ದುಡಿಮೆ ಬಂಡವಾಳಕ್ಕಾಗಿ ರಾಷ್ಟ್ರೀಕೃತ ಬ್ಯಾಂಕ್ ನಿಂದ ಸಾಲ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಮುದ್ರಾ ಯೋಜನೆಯಡಿ ಕೊಪ್ಪಳ ಜಿಲ್ಲೆಗೆ 25 ಗುರಿ ನಿಗದಿಪಡಿಸಲಾಗಿದೆ.
ಪ್ರತಿ ಫಲಾನುಭವಿಗೆ 50,000 ರೂ.ರಂತೆ ಶೇ.20 ಮಾರ್ಜಿನ್ ಮನಿ ಪಡೆಯಲು ಅವಕಾಶವಿರುತ್ತದೆ. ಅರ್ಹ ಫಲಾನುಭವಿಗಳು ಯಾವುದೇ ಮಧ್ಯವರ್ತಿಗಳನ್ನು ಸಂಪರ್ಕಿಸದೆ ಮೇ 31ರ ಒಳಗಾಗಿ ಅಗತ್ಯ ದಾಖಲೆಗಳೊಂದಿಗೆ ನೇರವಾಗಿ ಉಪ ನಿರ್ದೇಶಕರ ಕಛೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಅಶೋಕ ಸರ್ಕಲ್ ಹತ್ತಿರ ಕೊಪ್ಪಳ, ದೂರವಾಣಿ ಸಂಖ್ಯೆ:08539-295469 ಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.